ಚಿತ್ರಕವನದಿಂದ

ಮಕಮಲ್ಲು ಹಾಸಿನ ಮೇಲೆ ಹೂವ ರಂಗೋಲಿ
ಮಾಲಿನ್ಯಕೆಡೆಯಿಲ್ಲ; ಹಸಿರ ದರಬಾರು!
ಹಾದಿಹೋಕರಿಗೆಲ್ಲಾ ಪರಿಮಳದ ಹೋಲಿ
ನಿಸರ್ಗವೇ ವಹಿಸಿಹುದು ಜಗದ ಕಾರುಬಾರು

ದೇವನಡಿಗೂ ಅಲ್ಲ; ಹೆಣ್ಣ ಮುಡಿಗೂ ಇಲ್ಲ
ಹೀಗೇಕೆ ಬಿದ್ದಿವೆ ಇಲ್ಲಿ, ಅಯ್ಯೋ ಪಾಪ!
ದೇವಲೋಕದಿಂದ ಜಾರಿ ಬಿದ್ದಿಹುದಲ್ಲ
ಯಾರು ಕೊಟ್ಟಿರಬಹುದು ಮುನಿದು ಶಾಪ?

ಬರಡು ಬಾಳನು ಹರಸಿ ಸ್ವರ್ಗಮಾಡಿದೆ ಚೆಲುವು
ಒಂದೂ ಕುಂದಿರದ ಸಹಜ ಸೌಂದರ್ಯದಿಂದ
ಅಕಳಂಕ ಸೊಬಗಿಗೆ ತಲೆಬಾಗುತಿದೆ ಮನವು
ಪ್ರಕೃತಿಯೇ ದೈವವೆಂಬನುಭೂತಿಯಿಂದ.

***

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.