ಮಧ್ವನಾಮ –  ಶ್ರೀಪಾದರಾಜ ವಿರಚಿತ

ಜಯ ಜಯ ಜಗತ್ರಾಣ ಜಗದೊಳಗೆ ಸುತ್ರಾಣ ಅಖಿಲಗುಣ ಸದ್ಧಾಮ ಮಧ್ವನಾಮ || ಪ || ಆವ ಕಚ್ಛಪ ರೂಪದಿಂದಲಂಡೋದಕವ ಓವಿ ಧರಿಸಿದ ಶೇಷಮೂರುತಿಯನು ಆವವನ ಬಳಿವಿಡಿದು ಹರಿಯ ಸುರರೈಯ್ದುವರು ಆ ವಾಯು ನಮ್ಮ ಕುಲಗುರುರಾಯನು || ೧ || ಆವವನು ದೇಹದೊಳಗಿರಲು ಹರಿ ನೆಲಸಿಹನು ಆವವನು ತೊಲಗೆ ಹರಿ ತಾ ತೊಲಗುವ ಆವವನು ದೇಹದಾ ಒಳ Read More

ಬಂದಿದೆ ದೂರು ಬರಿದೆ ಪಾಂಡವರಿಗೆ- Bandide dooru – Kanakadaasaru

ರಚನೆ : ಕನಕದಾಸರು ಬಂದಿದೆ ದೂರು ಬರಿದೆ ಪಾಂಡವರಿಗೆಕೊಂದವರಿವರು ಕೌರವರನೆಂಬಪಕೀರ್ತಿ ||ಪಲ್ಲವಿ|| ಮುನ್ನಿನ ವೈರದಿ ಕಡುಸ್ನೇಹವ ಮಾಡಿಉನ್ನಂತಲೆತ್ತ ಪಗಡೆಯಾಡಿಸಿತನ್ನ ಕುಹಕದಿಂದ ಕುರುಬಲವನು ಕೊಂದಘನ್ನಘಾತುಕ ಶಕುನಿಯೋ? ಪಾಂಡವರೋ? ||೧|| ಮರಣ ತನ್ನಿಚ್ಚೆಯೊಳುಳ್ಳ ಗಾಂಗೇಯನುಧುರದೊಳು ಷಂಡನ ನೆವದಿಂದಲಿಸರಳ ಮಂಚದ ಮೇಲೆ ಮಲಗಿ ಮೊಮ್ಮಗನಕೊರಳ ಕೊಯ್ದವ ಭೀಷ್ಮನೋ? ಪಾಂಡವರೋ? ||2|| ಮಗನ ನೆವದಿ ಕಾಳಗವ ಬಿಸುಟು ಸುರನಗರಿಗೈದಲು ವೈರಾಗ್ಯದಿಂದಜಗವರಿಯಲು ಕುರುವಂಶಕೆ Read More

ದಾಸೋಹಂ ತವ ದಾಸೋಹಂ – Dasoham tava dasoham – jagannatha dasaru

ದಾಸೋಹಂ ತವ ದಾಸೋಹಂ ತವ ದಾಸೋಹಂ ತವ ದಾಸೋಹಂ ||ಪ|| ವಾಸುದೇವ ವಿಗತಾಘಸಂಘ ತವ ||ಅ. ಪ|| ಜೀವಾಂತರ್ಗತ ಜೀವ ನಿಯಾಮಕ ಜೀವ ವಿಲಕ್ಷಣ ಜೀವನದ ಜೀವಾಧಾರಕ ಜೀವರೂಪಿ ರಾ- ಜೀವ ಭವಜನಕ ಜೀವೇಶ್ವರ ತವ ||೧|| ಕಾಲಾಂತರ್ಗತ ಕಾಲ ನಿಯಮಕ ಕಾಲಾತೀತ ತ್ರಿಕಾಲಜ್ಞ ಕಾಲ ಪ್ರವರ್ತಕ ಕಾಲನಿವರ್ತಕ ಕಾಲೋತ್ಪಾದಕ ಕಾಲಮೂರ್ತಿ ತವ ||೨|| ಕರ್ಮಕರ್ಮಕೃತ Read More

ರಂಗ ನಿನ್ನ ಕೊಂಡಾಡುವ-Ranga ninna Kondaduva

ರಚನೆ : ಜಗನ್ನಾಥದಾಸರು – ಅಂಕಿತ : ಜಗನ್ನಾಥ ವಿಠಲ ರಂಗ ನಿನ್ನ ಕೊಂಡಾಡುವ ಮಂಗಳಾತ್ಮರ ಸಂಗಸುಖವಿತ್ತು ಕಾಯೊ ಕರುಣಾಸಾಗರ ||ಪ|| ಅರಿಯರೊ ನೀನಲ್ಲದೆ ಮತ್ತನ್ಯ ದೈವರ ಮರೆಯರೊ ನೀ ಮಾಡಿದ ಅನಿಮಿತ್ತೋಪಕಾರ ತೊರೆಯರೊ ನಿನ್ನಂಘ್ರಿಸೇವೆ ಪ್ರತಿವಾಸರ ಅರಿಯರೊ ಪರತತ್ವವಲ್ಲದೆ ಇತರ ವಿಚಾರ ||೧|| ಮೂಕ ಬಧಿರರಂತಿಪ್ಪರೊ ನೋಳ್ಪ ಜನಕೆ ಕಾಕುಯುಕುತಿಗಳನವರು ತಾರರೊ ಮನಕೆ ಸ್ವೀಕರಿಸರನರ್ಪಿತವೊಂದು Read More

ಪೋಗಬೇಡವೊ ನಿಗಮನುತ – Pogabedavo Nigamanuta madhurege

ಪೋಗಬೇಡವೊ ನಿಗಮನುತ ಮಧುರೆಗೆ ಪೋಗಬೇಡವೊ ಹರಿಯೆ||ಪಲ್ಲವಿ|| ಪೋಗುವಿ ನೀ ಪುನಾರಾಗಮ ಎಂದಿಗೆ ಹೇಗೆ ತಾಳುವೆವೊ ನಾಗಮರ್ದನ ಕೃಷ್ಣ||ಅನು|| ಬಾಲತನದಿ ಬಹುಲೀಲೆಗಳಿಂದಲಿ ಗೋಪಾಲಕರೊಡಗೂಡಿಬಾಳಪ್ರೇಮದಿ ನಮ್ಮಾಲಯವನು ಪೊಕ್ಕು ಪಾಲು ಮೊಸರು ಬೇಡಿಶೀಲಮೂರುತಿ ನಿಮ್ಮೊಲುಮೆಗೆ ಸಿಲುಕಿದಬಾಲೆಯರ ಸ್ಮರಣಂಬಿಗೆ ಗುರಿಮಾಡಿ ||-೧-|| ಹುಟ್ಟಿದ್ದು ಮಧುರೆ ತಂದಿಟ್ಟದ್ದು ಗೋಕುಲ ಪಟ್ಟದರಸ ಎನಿಸಿಬೆಟ್ಟಿಲಿ ಬೆಟ್ಟವ ಎತ್ತಿ ಪೊರೆದು ಬಂದ ಕಷ್ಟವ ಪರಿಹರಿಸಿಕೃಷ್ಣಮೂರುತಿ ಪರಮೇಷ್ಟಿಗಳರಸನೆನಮ್ಮಿಷ್ಟ ದೈವವೆ Read More