ವೇಣಿ ಮಾಧವನ ತೋರಿಸೆ ಜಾಣೆ ತ್ರಿವೇಣಿ
ಕಾಣದೆ ನಿಲ್ಲಲಾರೆನೆ||ಪಲ್ಲವಿ||
ಕಾಣುತ ಭಕ್ತರ ಕರುಣದಿ ಸಲಹುವ
ಜಾಣೆ ತ್ರಿವೇಣಿ ಸಾರೆ ಸುಖವಾಣಿ||ಅನುಪಲ್ಲವಿ||
ಬಂದೆನೆ ಬಹಳ ದೂರದಿ ಭವಸಾಗರ ತರಣಿ
ನಿಂದೆನೆ ನಿನ್ನ ತೀರದಿ
ಒಂದು ಗಳಿಗೆ ಹರಿಯ ಅಗಲಿ ನಾನಿರಲಾರೆ
ಮಂದಗಮನೆ ಎನ್ನ ಮುಂದಕೆ ಕರೆಯೆ ||೧||
ಶರಣಾಗತರ ಪಾಲಿಪುದು ತರಳೆ ನಿನ್ನ ಬಿರುದು
ಕರುಣದಿಂದೆನ್ನ ಪೊರೆಯೆ
ಸ್ಮರಣೆ ಮಾತ್ರದಿ ಭವತಾಪವ ಹರಿಸುವ
ಸ್ಮರನ ಪಿತ ಮುರಹರನ ಕರುಣದಿ ||೨||
ಸುಜನರಿಗೆಲ್ಲಾಧರಳೆ ಸುಖಶೀಲೆ ಕೇಳೆ
ಕುಜನ ಸಂಗವನು ಕೀಳೆ
ನಿಜಪದವಿಯನೀವ ಹಯವದನನ
ಪದ ರಜವ ತೋರಿಸೆ ಮದಗಜಗಮನೆ ||೩||
ವಾದಿರಾಜರ ಸೊಗಸಾದ ಕೀರ್ತನೆಯನ್ನು ವಿದ್ಯಾದಿಭೂಷಣರು ಸೊಗಸಾಗಿ ಹಾಡಿದ್ದಾರೆ. ಕೇಳಿಸಿದ್ದಕ್ಕಾಗಿ ಧನ್ಯವಾದಗಳು.
ವಾದಿರಾಜರ ಮೇರು ಪ್ರತಿಭೆಗೆ ಸಾಕ್ಷಿ:
‘ಜಾಣೆ ತ್ರಿವೇಣಿ ಸಾರೆ ಸುಖವಾಣಿ’ ಅಲ್ಲವೇ.
ಎಂತಾ ಒಳ್ಳೇ ಪದ್ಯ …ಖುಷಿ ಆಯ್ತು.
ಸುಮಧುರ ಗಾಯನ… 🙂