ರಚನೆ :- ವಾದಿರಾಜರು
ಆನಂದಮಯಗೆ ಚಿನ್ಮಯಗೆ
ಶ್ರೀಮನ್ನಾರಾಯಣಗೆ ಆರತಿ ಎತ್ತಿರೆ||
ವೇದವ ತಂದು ಬೆಟ್ಟವ ಪೊತ್ತು ಧರಣಿಯ
ಸಾಧಿಸಿ ಕಂಭದಿ ಬಂದವಗೆ|
ಭೂದಾನವ ಬೇಡಿ ನೃಪರ ಸಂಹರಿಸಿದ
ಆದಿಮೂರುತಿಗೆ ಆರತಿ ಎತ್ತಿರೆ||
ಇಂದುವದನೆ ಕೂಡಿ ಅಡವಿಯ ಚರಿಸಿ
ನಂದಗೋಕುಲದಿ ನಲಿದವಗೆ|
ಮಂದಗಮನೆಯರ ಮುಂದೆ ನಿರ್ವಾಣದಿ
ನಿಂದ ಮೂರುತಿಗೆ ಆರತಿ ಎತ್ತಿರೆ||
ತುರಗವನೇರಿ ದೈತ್ಯರ ಸೀಳಿ ಸುಜನರ
ಪೊರೆವ ಮಂಗಳ ಹಯವದನನಿಗೆ|
ವರದ ಯಾದವಗಿರಿ ಆದಿ ನಾರಾಯಣ
ಚರಣ ಕಮಲಕೆ ಆರತಿ ಎತ್ತಿರೆ||
https://www.youtube.com/watch?v=zsStuDsHA8Y