ರಚನೆ :- ವಾದಿರಾಜರು

ಆನಂದಮಯಗೆ ಚಿನ್ಮಯಗೆ
ಶ್ರೀಮನ್ನಾರಾಯಣಗೆ ಆರತಿ ಎತ್ತಿರೆ||

ವೇದವ ತಂದು ಬೆಟ್ಟವ ಪೊತ್ತು ಧರಣಿಯ
ಸಾಧಿಸಿ ಕಂಭದಿ ಬಂದವಗೆ|
ಭೂದಾನವ ಬೇಡಿ ನೃಪರ ಸಂಹರಿಸಿದ
ಆದಿಮೂರುತಿಗೆ ಆರತಿ ಎತ್ತಿರೆ||

ಇಂದುವದನೆ ಕೂಡಿ ಅಡವಿಯ ಚರಿಸಿ
ನಂದಗೋಕುಲದಿ ನಲಿದವಗೆ|
ಮಂದಗಮನೆಯರ ಮುಂದೆ ನಿರ್ವಾಣದಿ
ನಿಂದ ಮೂರುತಿಗೆ ಆರತಿ ಎತ್ತಿರೆ||

ತುರಗವನೇರಿ ದೈತ್ಯರ ಸೀಳಿ ಸುಜನರ
ಪೊರೆವ ಮಂಗಳ ಹಯವದನನಿಗೆ|
ವರದ ಯಾದವಗಿರಿ ಆದಿ ನಾರಾಯಣ
ಚರಣ ಕಮಲಕೆ ಆರತಿ ಎತ್ತಿರೆ||

https://www.youtube.com/watch?v=zsStuDsHA8Y

 

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.