ಚಿತ್ರ – ಆಕಸ್ಮಿಕ – ೧೯೯೩
ಸಾಹಿತ್ಯ ಮತ್ತು ಸಂಗೀತ – ಹಂಸಲೇಖ
ಗಾಯಕ – ಡಾ. ರಾಜ್ಕುಮಾರ್
ಬಾಳುವಂತ ಹೂವೆ ಬಾಡುವಾಸೆ ಏಕೆ
ಹಾಡುವಂತ ಕೋಗಿಲೆಯೆ ಅಳುವ ಆಸೆ ಏಕೆ
ಕವಲು ದಾರಿಯಲ್ಲಿ ಬಾಳು ಸಾಧ್ಯವೇ
ಅವಳಿ ದೋಣಿ ಮೇಲೆ ಯಾನ ಯೋಗ್ಯವೇ
ಯಾರಿಗಿಲ್ಲ ನೋವು ಯಾರಿಗಿಲ್ಲ ಸಾವು
ವ್ಯರ್ಥ ವ್ಯಸನದಿಂದ ಸಿಹಿಯು ಕೂಡ ಬೇವು
ಬಾಳು ಒಂದು ಸಂತೆ ಸಂತೆ ತುಂಬ ಚಿಂತೆ
ಮದ್ಯ ಮದಗಳಿಂದ ಚಿಂತೆ ಬೆಳೆವುದಂತೆ
ಯಾರಿಗಿಲ್ಲ ನೋವು ಯಾರಿಗಿಲ್ಲ ಸಾವು
ವ್ಯರ್ಥ ವ್ಯಸನದಿಂದ ಸಿಹಿಯು ಕೂಡ ಬೇವು
ಬಾಳು ಒಂದು ಸಂತೆ ಸಂತೆ ತುಂಬ ಚಿಂತೆ
ಮದ್ಯ ಮದಗಳಿಂದ ಚಿಂತೆ ಬೆಳೆವುದಂತೆ
ಅಂಕೆ ಇರದ ಮನಸನು ದಂಡಿಸುವುದು ನ್ಯಾಯ
ಮೂಕ ಮುಗ್ಧ ದೇಹವ ಹಿಂಸಿಸುವುದು ಹೇಯ
ಸಣ್ಣ ಬಿರುಕು ಸಾಲದೆ ತುಂಬು ದೋಣಿ ತಳ ಸೇರಲು
ಸಣ್ಣ ಅಳುಕು ಸಾಲದೆ ತುಂಬು ಬದುಕು ಬರಡಾಗಲು||1||
ಬಾಳ ಕದನದಲ್ಲಿ ಭರವಸೆಗಳು ಬೇಕು
ನಾಳೆ ನನ್ನದೆನ್ನುವ ನಂಬಿಕೆಗಳು ಬೇಕು
ಜೀವರಾಶಿಯಲ್ಲಿ ಮಾನವರಿಗೆ ಆದ್ಯತೆ
ನಾವೇ ಮೂಢರಾದರೆ ಜ್ಞಾನಕೆಲ್ಲಿ ಪೂಜ್ಯತೆ
ಇಲ್ಲಿ ಈಸಬೇಕು ಇದ್ದು ಜಯಿಸಬೇಕು
ನಾಗರಿಕರಾದಮೇಲೆ ಸುಗುಣರಾಗಬೇಕು
ನಿನ್ನ ಹಳದಿ ಕಣ್ಣಲಿ ಜನರನೇಕೆ ನೀ ನೋಡುವೆ?
ಅದು ಹೇಗೋ ಈ ತಾಣದ ಯು ಆರ್ ಎಲ್ ಪಡೆದು ಒಂದು ಒಳ್ಳೆಯ ಲಿಂಕ್ ಗಳಿಸಿದೆ ಎನ್ನುವ ತೃಪ್ತಿಯಾಗಿದೆ.
ಇದು ನನ್ನ ಫೇವರಿಟ್ ಹಾಡು. ಅಬ್ಬಾ…ಗೀತ ಸಾಹಿತ್ಯದ ಪ್ರತಿ ತುಣುಕು ಕೂಡ ಎಷ್ಟೊಂದು ಮಾರ್ಮಿಕ.
ಇಂಥ ಸಾಹಿತ್ಯ ಸಂಗ್ರಹಿಸಿಕೊಟ್ಟಿದ್ದಕ್ಕೆ ಧನ್ಯವಾದ.