ಚಿತ್ರ : ಕಣ್ತೆರೆದು ನೋಡು
ಸಾಹಿತ್ಯ : ಜಿ.ವಿ.ಅಯ್ಯರ್
ಸಂಗೀತ : ಜಿ.ಕೆ. ವೆಂಕಟೇಶ್
ಗಾಯಕ : ಜಿ.ಕೆ. ವೆಂಕಟೇಶ್

ಹಾಡು ಕೇಳಿ

ಕನ್ನಡದ ಮಕ್ಕಳೆಲ್ಲ ಒಂದಾಗಿ ಬನ್ನಿ
ತಾಯ್ನಾಡ ಜಯಭೇರಿ ನಾವಾದೆವೆನ್ನಿ
ಗೆಳೆತನದ ವರದ ಹಸ್ತ ನೀಡಿಬನ್ನಿ
ಮೊಳೆತಿರುವ ಭೇದಗಳ ಬಿಟ್ಟು ಬನ್ನಿ||

ಒಂದು ತಾಯಿಯ ಮಡಿಲ ಮಕ್ಕಳೆನ್ನಿ
ಒಂದು ತಾಯಿಯ ನುಡಿಯ ನುಡಿವೆವೆನ್ನಿ
ಕೀಳು ನಾವೆಂಬುವರ ಕಣ್ತೆರೆಯಿರೆನ್ನಿ
ಬೀಳು ನಾವೆಂಬುವರ ಬಾಯ್ಮುಚ್ಚಬನ್ನಿ||

ಗಂಗ ಕದಂಬಾದಿ ಚಾಲುಕ್ಯ ರಾಷ್ಟ್ರಕೂಟ
ಯಾದವ ಬಲ್ಲಾಳ ವಿಜಯನಗರ ವೀರರ
ಗತವೈಭವ ಕಾಣುವಾ|
ನವಶಕ್ತಿಯ ತುಂಬುವ ಭುವನೇಶ್ವರಿ ನೀಡುವ
ಸಂದೇಶವ ಸಾರುವಾ||

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.