ರಚನೆ – ವಿಜಯ ದಾಸರು
ಗಾಯಕ – ರಾಯಚೂರ್ ಶೇಷಗಿರಿದಾಸ್
ಸಂಗೀತ – ಪ್ರವೀಣ್ ಗೋಡ್ಕಿಂಡಿ

ಹಾಡು ಕೇಳಿ

ನಿನ್ನ ಒಲುಮೆಯಿಂದ ನಿಖಿಳ ಜನರು ಬಂದು ಮನ್ನಿಸುವರೊ ಮಹರಾಯ
ಎನ್ನ ಪುಣ್ಯಗಳಿಂದ ಈ ಪರಿ ಉಂಟೇನೋ ನಿನ್ನದೇ ಸಕಲ ಸಂಪತ್ತು ||ಪಲ್ಲವಿ||

ಜೀರ್ಣ ಮಲಿನ ವಸ್ತ್ರ ಕಾಣದ ಮನುಜಗೆ ಊರ್ಣ ವಿಚಿತ್ರ ವಸನ
ವರ್ಣವರ್ಣದಿಂದ ಬಾಹೋದೇನೊ ಸಂಪೂರ್ಣ ಗುಣಾರ್ಣವ ದೇವಾ
ಸಂಜೀತನಕ ಇದ್ದು ಸಣ್ಣ ಸವಟು ತುಂಬ ಗಂಜಿ ಕಾಣದೆ ಬಳಲಿದೆನೊ
ವ್ಯಂಜನ ನಾನಾ ಸುಭಕ್ಷ್ಯ ಭೋಜ್ಯಂಗಳ ಭುಂಜಿಸುವದು ಮತ್ತೇನೋ ? ||೨||

ಒಬ್ಬ ಹೆಂಗಸಿಗೆ ಅನ್ನ ಹಾಕುವದಕ್ಕೆ ತಬ್ಬಿಬ್ಬುಗೊಂಡೆ ನಾ ಹಿಂದೆ
ನಿಬ್ಬರದಲಿ ಸರ್ವರ ಕೂಡಿನ್ನು ಹಬ್ಬವನುಂಡೆನೊ ಹರಿಯೆ
ಮನೆಮನೆ ತಿರುಗಿದೆ ಕಾಸು ಪುಟ್ಟದೆ ಸುಮ್ಮನೆ ಜಾಲವರಿದು ಬಾಹೇನು
ಹಣ ಹೊನ್ನು ದ್ರವ್ಯ ಒಮ್ಮಿಂದೊಮ್ಮೆ ಈಗ ಎನಗೆ ಪ್ರಾಪುತಿ ನೋಡೋ ಜೀಯ ||೨||

ಮಧ್ಯಾಹ್ನ ಕಾಲಕ್ಕೆ ಅತಿಥಿಗಳಿಗೆ ಅನ್ನ ಮೆದ್ದೆನೆಂದರೆ ಈಯದಾದೆ
ಈ ಧರೆಯೊಳು ಸತ್ಪಾತ್ರರಿಗುಣಿಸುವ ಪದ್ಧತಿ ನೋಡೊ ಧರ್ಮಾತ್ಮ
ನೀಚೋಚ್ಛ ತಿಳಿಯದೆ ಸರ್ವರ ಚರಣಕೆ ಚಾಚಿದೆ ನೊಸಲು ಹಸ್ತಗಳ
ಯೋಚಿಸಿ ನೋಡಲು ಸೋಜಿಗವಾಗಿದೆ ವಾಚಕೆ ನಿಲುಕದೊ ಹರಿಯೆ ||೩||

ವೈದಿಕ ಪದವಿಯ ಕೊಡುವನಿಗೆ ಲೌಕಿಕನೈದಿಸುವುದು ಮಹಾಖ್ಯಾತಿ
ಮೈದುನಗೊಲಿದ ಶ್ರೀ ವಿಜಯವಿಠಲ ನಿನ್ನ ಪಾದ ಸಾಕ್ಷಿ ಅನುಭವವೊ ||೪||

One thought on “ನಿನ್ನ ಒಲುಮೆಯಿಂದ ನಿಖಿಳ ಜನರು ಬಂದು”

  1. ವೇಣಿ, ಇದೇನಿದು ಇಲ್ಲಿಗೆ ದಾಸವರೇಣ್ಯರ ಆವಳಿಯೇ ಬಂದು ನಿಂತಿದೆ! ಸಾಲು ಸಾಲಾಗಿ ದಾಸರ ಹಾಡುಗಳನ್ನು ಕೇಳಿಸುವ ನಿನ್ನ ಈ ಅವಿರತ ಪ್ರಯತ್ನಕ್ಕೆ ಶ್ಲಾಘನೆಗಳು.
    ಜೊತೆಗೆ ನಿನ್ನ ಬರಹಗಳನ್ನೂ ಎದುರು ನೋಡುತ್ತೇನೆ ಅಂತ ನೆನಪಿದೆ ತಾನೆ?

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.