ಆನಂದ ಆನಂದ ಮತ್ತೆ ಪರಮಾನಂದ
ಆನಂದ ಕಂದನೊಲಿಯೆ ಏನಂದಿದ್ದೇ ವೇದ ವೃಂದ ||ಪ||

ಅ ಮೊದಲು ಶಕಾರಂತ ಆ ಮಹಾ ವರ್ಣಗಳೆಲ್ಲಾ
ಸ್ವಾಮಿಯಾದ ವಿಷ್ಣುವಿನ ನಾಮವೆಂದು ತಿಳಿದವರಿಗೆ ||೧||

ಜಲ ಕಾಷ್ಟ ಶೈಲ ಗಗನ ನೆಲ ಪಾವಕ
ತರು ಫಲ ಪುಷ್ಪಗಳಲ್ಲಿ ಹರಿ ವ್ಯಾಪ್ತನೆಂದರಿತವರಿಗೆ ||೨||

ಪೋಪುದು, ಬರುತಿಪ್ಪುದು, ಕೋಪ ಶಾಂತಿ ಮಾಡುವುದು
ರೂಪ ಲಾವಣ್ಯವು ಹರಿಯ ವ್ಯಾಪಾರವೆಂದರಿತವರಿಗೆ ||೩||

ಮಧ್ವ ಶಾಸ್ತ್ರ ಪ್ರವಚನ ಮುದ್ದು ಕೃಷ್ಣ ದರುಶನ
ಶುದ್ಧ ವಿಜಯವಿಠಲನ ಪೊಂದಿ ಕೊಂಡಾಡುವವರಿಗೆ ||೪||

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.