ರಚನೆ : ಮಾಸ್ತಿ ವೆಂಕಟೇಶ ಅಯ್ಯಂಗಾರ್ (ಶ್ರೀನಿವಾಸ)
ಬಾ ಸವಿತಾ ಬಾ ಸವಿತಾ
ಒಳಗಿನ ಕಣ್ಣನು ಮುಚ್ಚಿಸಿವೊಮ್ಮೆ
ತಿಳಿವಿಗೆ ಬಣ್ಣವ ಹಚ್ಚಿಸಿವೊಮ್ಮೆ
ಒಳಿತಲ್ಲದುದೆ ಒಳಿತೆಂಬುದರ
ಚಳಕವೆಲ್ಲಕೆ ವಿನಾಶವ ತಾ
ಬಾ ಸವಿತಾ ಬಾ ಸವಿತಾ ಬಾ ಸವಿತಾ
ನೆಲೆಯಿಂದ ಹೊರಟು ಅಲೆ ಅಲೆ ಅಲೆ ಅಲೆ
ಛಲ ತೊಟ್ಟ ಮಲ್ಲ, ವಾಹಿನಿ ಬಾ
ನಿಲವಿಲ್ಲಾ ಜಗದಿ ಕತ್ತಲೆಗೆಂದು
ಗೆಲವನು ಸಾರುವ ಭಾಸವ ತಾ
ಬಾ ಸವಿತಾ ಬಾ ಸವಿತಾ ಬಾ ಸವಿತಾ
ಓಂ ತತ್ಸವಿತುರ್ವರೇಣ್ಯವೆಂಬೆವು
ಅಂತಲ್ಲದೆ ಬೇರೆಯದನು ನಂಬೆವು
ಪಂಥವ ಬೆಳೆಗಿಸಿ ನಿರೂಪಿಸಿ ಕೊಂಬೆವು
ಶಾಂತ ಸುಂದರ ಶಿವದಾ ಸವಿತಾ