ಚಂದ್ರಚೂಡ ಶಿವಶಂಕರ ಪಾರ್ವತಿ ರಮಣನೆ

ರಚನೆ : ಪುರಂದರದಾಸರು ವಿದ್ಯಾಭೂಷಣರ ದನಿಯಲ್ಲಿ ಚಂದ್ರಚೂಡ ಶಿವಶಂಕರ ಪಾರ್ವತಿ ರಮಣನೆ ನಿನಗೆ ನಮೋ ನಮೋ ||ಪಲ್ಲವಿ|| ಸುಂದರ ಮೃಗಧರ ಪಿನಾಕಧನುಕರ ಗಂಗಾಶಿರ ಗಜಚರ್ಮಾಂಬರಧರ ||ಅನು|| ನಂದಿವಾಹನಾನಂದದಿ೦ದ ಮೂರ್ಜಗದಿ ಮೆರೆವನು ನೀನೆ ಅಂದು ಅಮೃತಘಟದಿಂದುದಿಸಿದ ವಿಷತ೦ದು ಭುಜಿಸಿದವ ನೀನೆ ಕಂದರ್ಪನ ಕ್ರೋಧದಿ೦ದ ಕಣ್ತೆರೆದು ಕೊಂದ ಉಗ್ರನು ನೀನೆ ಇಂದಿರೇಶ ಶ್ರೀರಾಮನ ನಾಮವ ಚಂದದಿ ಪೊಗಳುವ ನೀನೆ Read More

ಆನಂದವಾದ ಮಿಠಾಯಿ – ಹೀಗೂ ಒಂದು ಹೊಳಹು

‘ನಂದತನಯ ಗೋವಿಂದನ ಭಜಿಪುದಾನಂದವಾದ ಮಿಠಾಯಿ’ ಗಾಯಕಿ ಎಂ. ಎಸ್. ಶೀಲಾರ ದನಿಯಲ್ಲಿ ಹಿಂದೆಂದೋ ಕೇಳಿದ್ದ ಈ ಹಾಡನ್ನು ಈಚೆಗೆ ಮತ್ತೊಮ್ಮೆ ಕೇಳಿದೆ. ಹಾಡನ್ನು ಕೇಳುತ್ತಿದ್ದಾಗ, ಈ ಕೀರ್ತನೆಯ ರಚನಕಾರರಾದ ಪುರಂದರದಾಸರು, ನುರಿತ ವ್ಯಾಪಾರಿಯೊಬ್ಬನು ತನ್ನ ಉತ್ಪನ್ನವನ್ನು ಪ್ರಚುರಪಡಿಸಲು, ಮಾರುಕಟ್ಟೆಯಲ್ಲಿ ಚಾಲ್ತಿಯಲ್ಲಿರುವ ಉಳಿದೆಲ್ಲಾ ಸರಕುಗಳಿಗಿಂತ ತನ್ನದನ್ನು ಹೆಚ್ಚು ಮಾರಾಟ ಮಾಡಲು ಅನುಸರಿಸುವ ತಂತ್ರವನ್ನೇ ಇಲ್ಲಿಯೂ ಅನುಸರಿಸಿದ್ದಾರಲ್ಲವೇ ಎನ್ನಿಸಿತು. Read More

ಲೊಳಲೊಟ್ಟೆ ಎಲ್ಲಾ ಲೊಳಲೊಟ್ಟೆ

ರಚನೆ : ಪುರಂದರದಾಸರು ಗಾಯಕ – ವಿದ್ಯಾಭೂಷಣ ಹಾಡು ಕೇಳಿ ಲೊಳಲೊಟ್ಟೆ ಎಲ್ಲಾ ಲೊಳಲೊಟ್ಟೆ ||ಪ|| ಆನೆ ಕುದುರೆ ಒಂಟೆ ಲೊಳಲೊಟ್ಟೆ ಸೇನೆ ಭಂಡಾರವು ಲೊಳಲೊಟ್ಟೆ ಮಾನಿನಿಯರ ಸಂಗ ಲೊಳಲೊಟ್ಟೆ ದೊಡ್ಡ ಕ್ಷೋಣೀಶನೆಂಬುದು ಲೊಳಲೊಟ್ಟೆ ||೧|| ಮುತ್ತು ಮಾಣಿಕ್ಯ ಲೊಳಲೊಟ್ಟೆ ಚಿನ್ನ ಛತ್ರ ಚಾಮರ ಧ್ವಜ ಲೊಳಲೊಟ್ಟೆ ಸುತ್ತಗಲ ಕೋಟೆ ಲೊಳಲೊಟ್ಟೆ ಮತ್ತೆ ಉತ್ತಮಪ್ರಭುತ್ವ ಲೊಳಲೊಟ್ಟೆ Read More

ಕೊಡು ಬೇಗ ದಿವ್ಯಮತಿ

ಹಾಡು ಕೇಳಿ ಕೊಡು ಬೇಗ ದಿವ್ಯಮತಿ ಸರಸ್ವತಿ ||ಪಲ್ಲವಿ|| ಮೃಡ ಹರಿ ಹಯಮುಖರೊಡೆಯಳೆ ನಿನ್ನ ಅಡಿಗಳಿಗೆರಗುವೆ ಅಮ್ಮಾ ಬ್ರಹ್ಮನ ರಾಣಿ||ಅನು ಪಲ್ಲವಿ|| ಇಂದಿರಾ ರಮಣನ ಹಿರಿಯ ಸೊಸೆಯು ನೀನು ಬಂದೆನ್ನ ವದನದಿ ನಿಂದು ನಾಮವ ನುಡಿಸೆ||೧|| ಅಖಿಲ ವಿದ್ಯಾಭಿಮಾನಿ ಅಜನ ಪಟ್ಟದ ರಾಣಿ ಸುಖವಿತ್ತು ಪಾಲಿಸೆ ಸುಜನ ಶಿರೋಮಣಿ||೨|| ಪತಿತ ಪಾವನೆ ನೀನೇ ಗತಿಯೆಂದು ನಂಬಿದೆ Read More

ತಿರುಪತಿ ವೆಂಕಟರಮಣ, ನಿನಗೇತಕೆ ಬಾರದು ಕರುಣ?

ಪುತ್ತೂರು ನರಸಿಂಹನಾಯಕರ ದನಿಯಲ್ಲಿ ತಿರುಪತಿ ವೆಂಕಟರಮಣ ನಿನಗೇತಕೆ ಬಾರದೊ ಕರುಣ ನಂಬಿದೆ ನಿನ್ನಯ ಚರಣ ಪರಿಪಾಲಿಸಬೇಕೋ ಕರುಣ ಅಳಗಿರಿಯಿಂದಲಿ ಬಂದ ಸ್ವಾಮಿ ಅಂಜನ ಗಿರಿಯಲಿ ನಿಂದ ಕೊಳಲನೂದುವ ಚಂದ ನಮ್ಮ ಕುಂಡಲರಾಯ ಮುಕುಂದ ಬೇಟೆಯಾಡುತ ಬಂದ ಸ್ವಾಮಿ ಬೆಟ್ಟದ ಮೇಲೆ ನಿಂದ ವೀಟುಗಾರ ಗೋವಿಂದ ಅಲ್ಲಿ ಜೇನು ಸಕ್ಕರೆಯನು ತಿಂದ ಮೂಡಲಗಿರಿಯಲಿ ನಿಂದ ಮುದ್ದು ವೆಂಕಟಪತಿ Read More