ಸುಲಿದ ಬಾಳೆಯ ಹಣ್ಣಿನಂದದಿ – ಮಹಾಲಿಂಗಕವಿ

ಸುಲಿದ ಬಾಳೆಯ ಹಣ್ಣಿನಂದದಿ ಕಳೆದ ಸಿಗುರಿನ ಕಬ್ಬಿನಂದದಿ ಅಳಿದ ಉಷ್ಣದ ಹಾಲಿನಂದದಿ ಸುಲಭವಾಗಿರುವ ಈ ಲಲಿತವಹ ಕನ್ನಡ ನುಡಿಯಲಿ ತಿಳಿದು ತನ್ನಲಿ ತನ್ನ ಮೋಕ್ಷವ ಗಳಿಸಿಕೊಂಡರೆ ಸಾಲದೆ? ಸಂಸ್ಕೃತದಲಿನ್ನೇನು?   *            *         *

ಕನ್ನಡದ ನೆಲದ – ಸಾಲಿ ರಾಮಚಂದ್ರರಾಯರು

ಕನ್ನಡದ ನೆಲದ ಪುಲ್ಲೆನಗೆ ಪಾವನ ತುಳಸಿ! ಕನ್ನಡದ ನೆಲದ ನೀರ್ವೊನಲೆನಗೆ ದೇವನದಿ! ಕನ್ನಡದ ನೆಲದ ಕಲ್ಲೆಮಗೆ ಶಾಲಗ್ರಾಮ ಶಿಲೆ! ಕನ್ನಡಂ ದೈವಮೈ! ಕನ್ನಡದ ಶಬ್ದಮೆಮಗೋಂಕಾರಮೀಯೆನ್ನ ಕನ್ನಡದ ನುಡಿಯೆ ಗಾಯತ್ರಿಯದ್ಭುತ ಮಂತ್ರ- ಮಿನ್ನಾವುದೈ ಪೆರತು ಕನ್ನಡದ ಸೇವೆಯಿಂದಧಿಕಮೀ ಜಗದೊಳಗೆ?              *                  * ಕೃಪೆ: ದಟ್ಸ್ ಕನ್ನಡ