ಮನಸು ಗೊಂದಲದ ಗೂಡು

ಇಳಿಸಂಜೆಗೆ ಕರೆಗಂಟೆಯ ಸದ್ದಿಗೆ ಎಚ್ಚರಾಗಿ ಬಾಗಿಲು ತೆರೆದವನಿಗೆ ಕಾಣಿಸಿದ್ದು ಯಾಮಿನಿಯ ತಂದೆ! ನಿದ್ದೆ ತುಂಬಿದ ತನ್ನ ಕಣ್ಣುಗಳು… ಮುದುರಿದ ತನ್ನ ಬಟ್ಟೆಗಳು… ಕೊಳಕಾದ ತನ್ನ ರೂಮು…ಅವರನ್ನು ಒಳಗೆ ಕರೆಯಲೂ ಸಂಕೋಚವೆನಿಸಿತು ಅವನಿಗೆ… `ಅಯ್ಯೋ ತಾವು ನನ್ನನ್ನ ಹುಡುಕಿಕೊಂಡು ಇಷ್ಟು ದೂರ ಯಾಕೆ ಬರಕ್ಕೆ ಹೋದ್ರೀ…ಯಾಮಿನೀ ಹತ್ರ ಹೇಳಿ ಕಳಿಸಿದ್ದರೆ ನಾನೇ ಬಂದು ನಿಮ್ಮನ್ನ ನೋಡ್ತಿದ್ದೆ’ಎಂದ ಅದಕ್ಕವರು Read More

ಲೋಕದ ಕಣ್ಣಿಗೆ ರಾಧೆಯು ಕೂಡ

ಕವಿ – ಎಚ್. ಎಸ್. ವೆಂಕಟೇಶಮೂರ್ತಿ ಲೋಕದ ಕಣ್ಣಿಗೆ ರಾಧೆಯು ಕೂಡ ಎಲ್ಲರಂತೆ ಒಂದು ಹೆಣ್ಣು ನನಗೋ ಆಕೆ ಕೃಷ್ಣನ ತೋರುವ ಪ್ರೀತಿಯು ನೀಡಿದ ಕಣ್ಣು ತಿಂಗಳ ರಾತ್ರಿ ತೊರೆಯ ಸಮೀಪ ಉರಿದರೆ ಯಾವುದೋ ದೀಪ ಯಾರೋ ಮೋಹನ ಯಾವ ರಾಧೆಗೊ ಪಡುತಿರುವನು ಪರಿತಾಪ ನಾನು ನನ್ನದು ನನ್ನವರೆನ್ನುವ ಹಲವು ತೊಡಕುಗಳ ಮೀರಿ ಧಾವಿಸಿ ಸೇರಲು Read More

ಮುಂದೇನು ಎಂದು ಹೇಳುವರು ಯಾರು?

ಪರಸ್ಪರ “ಹೇಗಿದ್ದೀ?” “ಚೆನ್ನಾಗಿದ್ದೇನೆ”ಗಳ ನಂತರ “ಪರದೇಶ ಹೇಗಿತ್ತು?” ಪ್ರಶ್ನೆ ಅಚಾನಕ್ಕಾಗಿ ಸುದೀಪನ ಬಾಯಿಂದ ಹೊರಬಿತ್ತು. ಒಂದೆರಡು ಕ್ಷಣಗಳ ಮೌನದ ಮೇಲೆ ಬಂದ ಉತ್ತರ ಸುನಯನಳದ್ದೇ ಹೌದಾ ಅನ್ನುವ ಸಂಶಯವೂ ಅವನಿಗೆ ಬರುವಂತಾಯ್ತು. “ಪರದೇಶವೇನೋ ಚೆನ್ನಾಗಿದೆ ಸುದೀಪ, ಆದರೆ ಪರದೇಶಿಯೊಡನೆ ಜೀವನ ಸರಿಯಾಗಲಿಲ್ಲ” ಅಂದಳು. “ಯಾಕೇಂತ ನಾನು ಕೇಳಲ್ಲ, ನಿನ್ನ ನೋವನ್ನು ಕೆದಕಲ್ಲ” ಅಂದ. “ಇಲ್ಲ, ನಿನ್ನ Read More

ವನಸುಮ – ಡಿ.ವಿ.ಗುಂಡಪ್ಪ

ಕವಿ – ಡಿ.ವಿ.ಗುಂಡಪ್ಪ ವನಸುಮದೊಳೆನ್ನ ಜೀ- ವನವು ವಿಕಸಿಸುವಂತೆ ಮನವನನುಗೊಳಿಸು ಗುರುವೆ, ಹೇ ದೇವಾ ಜನಕೆ ಸಂತಸವೀವ ಘನನು ನಾನೆಂದೆಂಬ ಎಣಿಕೆ ತೋರದೆ ಜಗದ ಪೊಗಳಿಕೆಗೆ ಬಾಯ್ ಬಿಡದೆ ಕಾನನದಿ ಮಲ್ಲಿಗೆಯು ಮೌನದಿಂ ಬಿರಿದು ನಿಜ ಸೌರಭವ ಸೂಸಿ ನಲವಿಂ ತಾನೆಲೆಯ ಪಿಂತಿರ್ದು ದೀನತೆಯ ತೋರಿ ಅಭಿ- ಮಾನವನು ತೊರೆದು ಕೃತಕೃತ್ಯತೆಯ ಪಡೆವಂತೆ ಉಪಕಾರಿ ನಾನು Read More

ಒಲವೇ..ಹೂವಾಗಿ ಬಳಿ ಬಂದೆ! – 5

ಬೆಳಗಿನ ಸೂರ್ಯನ ಕಿರಣಗಳು ಕಿಟಕಿಯ ಒಳಗೆ ತೂರಿ ಸುದೀಪನನ್ನು ಎಚ್ಚರಗೊಳಿಸಿದವು.  ಸುದೀಪನ ಮನಸ್ಸಿನಲ್ಲಿದ್ದ ಭ್ರಮೆಗಳೂ ಕತ್ತಲಿನೊಂದಿಗೆ ಕರಗಿಹೋಗಿತ್ತು.  ವಾಸ್ತವ ಬೆಳಗಿನ ಸೂರ್ಯನಂತೆ ನಿಚ್ಚಳವಾಗಿ ಕಣ್ಣೆದುರು ಹೊಳೆಯುತ್ತಿತ್ತು.  ಸುದೀಪ ಹುಸಿ ಆದರ್ಶವಾದಿಯಲ್ಲ.  ಭಾವನೆಗಳಿಗಿಂತ ಬದುಕೇ ಮುಖ್ಯವೆಂದು ನಂಬಿದವನು.    ತಾನು ಯಾಮಿನಿಯಂತೆ ಆದರ್ಶದ ಬೆನ್ನುಹತ್ತಿ ಹೋಗುವ ಶಕ್ತಿ ಇಲ್ಲದವನು ಎಂದು ಅವನಿಗೆ ಚೆನ್ನಾಗಿ ಗೊತ್ತಿತ್ತು. ಸೃಷ್ಟಿ ಯಾಮಿನಿಯ ಮಗಳೇ ಆಗಿದ್ದರೆ ಆ Read More