ಸುಂದರಮೂರುತಿ ಮುಖ್ಯಪ್ರಾಣ ಬಂದ ನಮ್ಮನೆಗೆ

ಸುಂದರಮೂರುತಿ ಮುಖ್ಯಪ್ರಾಣ ಬಂದ ನಮ್ಮನೆಗೆ ಪ್ರಾಣ ಬಂದ ಮನೆಗೆ ಶ್ರೀರಾಮನಾಮ ಧ್ವನಿಗೆ ||ಪ|| ಕನಕಲಂದುಗೆ ಗೆಜ್ಜೆ ಝಣಝಣರೆನುತ ಝಣಕು ಝಣಕೆಂದು ನಾದವಗೈಯುತ ಪ್ರಾಣ ಬಂದ ಮನೆಗೆ ಶ್ರೀರಾಮನಾಮ ಧ್ವನಿಗೆ||೧|| ತುಂಬುರು ನಾರದ ವೀಣೆ ಬಾರಿಸುತ ರಾಮನಾಮ ಪಾಡುತ ಪ್ರಾಣ ಬಂದ ಮನೆಗೆ ಶ್ರೀರಾಮನಾಮ ಧ್ವನಿಗೆ||೨|| ಪುರಂದರವಿಠಲನ ನೆನೆದು ಪಾಡುತಲಿ ಆಲಿಂಗನ ಮಾಡುತಲಿ ಪ್ರಾಣ ಬಂದ ಮನೆಗೆ Read More

ಆನಂದತೀರ್ಥರಿಗೆ ತುಂಬು ಸಂತಸವೆಂಬ

ಆನಂದತೀರ್ಥ ವಿರಚಿತ ದ್ವಾದಶಸ್ತೋತ್ರ ಕನ್ನಡ ಅನುವಾದ : ಬನ್ನಂಜೆ ಗೋವಿಂದಾಚಾರ್ಯ ಓ ಸಂತಸದ ಸೆಲೆಯೆ ಬಿಡುಗಡೆಯ ನೀವವನೆ | ಓ ಅರಳುದಾವರೆಯ ಕಂಗಳವನೆ ಆನಂದತೀರ್ಥರಿಗೆ ತುಂಬು ಸಂತಸವೆಂಬ | ವರವಿತ್ತ ದೈವತವೆ ನಿನಗೆ ನಮನಂ || ಬಗೆಯ ಸುಂದರಿಯನ್ನು ಎದೆಯಲ್ಲಿ ಹೊತ್ತವನೆ | ಓ ಗೋವಿಂದನೆ ನಿನಗೆ ನಮನಂ || ಬಗೆಯ ಬೆಳಗುವ ಚಂದ್ರ ಸುರರನಾಳುವ Read More

ಮಿಥಿಲೆ – ಸು.ರಂ.ಎಕ್ಕುಂಡಿ

‘ಮಿಥಿಲೆ’ ಕವಿ : ಸುಬ್ಬಣ್ಣ.ರಂಗನಾಥ.ಎಕ್ಕುಂಡಿ ಎಂದಾದರೊಂದು ದಿನ ನಾನು ಮಿಥಿಲೆಗೆ ಹೋಗಿ ಬೀದಿಬೀದಿಯನಲೆದು ನೋಡಬೇಕು ಅಲ್ಲಿ ಎಲ್ಲಾದರೂ ಮರದ ನೆರಳಿಗೆ ಕುಳಿತು ರಾಮಭದ್ರನ ಮಹಿಮೆ ಹಾಡಬೇಕು ಅಲ್ಲಿಹವು ಎತ್ತರದ ಮನೆಗಳು ಮಂದಿರವು ಅಲ್ಲಿ ಬೇಕಾದಷ್ಟು ತುಳಸಿ ಹೂವು ಹೆಜ್ಜೆ ಹೆಜ್ಜೆಗೆ ಅಲ್ಲಿ ಸಂಪಿಗೆಯ ಮರಗಳಿವೆ ಗಿಳಿಗಳಿವೆ. ಇಲ್ಲ ಪಂಜರದ ನೋವು ಅಲ್ಲಿ ಪುಷ್ಕರಿಣಿಗಳ ತುಂಬ ತಾವರೆಯಿಹವು Read More

ಜೈ ಜೈ ರಾಮ ಹರೇ

ರಚನೆ : ವರದೇಶ ವಿಠಲ ಪುತ್ತೂರು ನರಸಿಂಹ ನಾಯಕ್ ದನಿಯಲ್ಲಿ ||ಜೈ ಜೈ ರಾಮ ಹರೇ ಜೈ ಜೈ ಕೃಷ್ಣ ಹರೇ || ಕೌಸಲ್ಯಜ ವರ ವಂಶೋದ್ಭವ ಸುರ ಸಂಸೇವಿತ ಪದ ರಾಮ ಹರೇ ಕಂಸಾದ್ಯಸುರರ ಧ್ವಂಸಗೈದ ಯದುವಂಶೋದ್ಭವ ಕೃಷ್ಣ ಹರೇ ಮುನಿಮಖರಕ್ಷಕ ಧನುಜರ ಶಿಕ್ಷಕ ಫಣಿಧರ ಸನ್ನುತ ರಾಮ ಹರೇ ಘನವರ್ಣಾಂಗ ಸುಮನಸರೊಡೆಯ ವನಜಾಸನ Read More

ಹೊಸವರ್ಷ ಬಂದಂತೆ ಯಾರು ಬಂದಾರು?

ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ ಹೊಸವರ್ಷ ಬಂದಂತೆ ಯಾರು ಬಂದಾರು? ಹೊಸವರ್ಷ ಬಂದಂತೆ ಯಾರು ಬಂದಾರು ಗಿಡಮರಕೆ ಹೊಸವಸ್ತ್ರ ಯಾರು ತಂದಾರು ಹಾಡೆಂದು ಕೋಗಿಲೆಯ ಕೂಗಿ ಕರೆದಾರು ಮಾವಿನಾ ಚಿಗುರನ್ನು ತಿನಲು ಕೊಟ್ಟಾರು? ಏನೋ ನಿರೀಕ್ಷೆ ಸೃಷ್ಟಿಯಲ್ಲೆಲ್ಲ ಹೂಗಳ ಪರೀಕ್ಷೆ ದುಂಬಿಗಳಿಗೆಲ್ಲ ಬಂದನೊ ವಸಂತ ಬಂಧಿಗಳೇ ಎಲ್ಲ! ಹೊಸ ಬಯಕೆ, ಹೊಸ ಅಲೆ ರುಚಿರುಚಿಯ ಬೆಲ್ಲ! Read More