ಕನ್ನಡ ದಾಸಯ್ಯ

ಕವಿ : ಸಕ್ಕರಿ ಬಾಳಾಚಾರ್ಯ (ಶಾಂತಕವಿ) – (೧೮೫೬-೧೯೩೦) ಬೇಡಲು ಕನ್ನಡ ದಾಸಯ್ಯ ಬಂದಿಹ ನೀಡಿರಮ್ಮ ; ತಡಮಾಡದಲೇ||ಪ|| ಹಾಡೊಂದನಾತನು ಹೊಸದಾಗಿ ಮಾಡಿಹ ಕೂಡಿರಿ ಕೇಳಿರಿ ಹಾಡುವೆನು||ಅನು|| ಕನ್ನಡ ಮಾತಿನ ತಂದೆತಾಯಿಗಳಿಂದ ಚೆನ್ನ ಚೆನ್ನೆಯರೆಲ್ಲ ಹುಟ್ಟಿದಿರಿ. ಕನ್ನಡ ಮಾತಿನ ಜೋಗುಳವನು ಕೇಳಿ ಕನ್ನಡ ತೊಟ್ಟಿಲೊಳಾಡಿದಿರಿ, ಕನ್ನಡ ದೇಶದೆ ದೊಡ್ಡವರಾದಿರಿ ಕನ್ನಡ ವಿದ್ಯೆಯ ಗಳಿಸಿದಿರಿ ಕನ್ನಡದಿಂದಲೆ ಸಿರಿವಂತರಾದಿರಿ Read More

ಭಾಗ – 23

ಮನೋಶಾಸ್ತ್ರ ಹಾಗು ಮಾನವಶಾಸ್ತ್ರ ಇವು ಕವಿತಾಳ ಮೆಚ್ಚಿನ ವಿಷಯಗಳು.ಅಲ್ಲದೆ ಅವಳು ಒಂದು ರೀತಿಯ ಸ್ತ್ರೀಸ್ವಾತಂತ್ರ್ಯವಾದಿ. ಕಾಲೇಜಿನಲ್ಲಿ ಜರುಗುವ ಚರ್ಚಾಕೂಟಗಳಲ್ಲಿ, ಮಾನವ ಸಮಾಜ ಪ್ರಾರಂಭವಾದ ಗಳಿಗೆಯಿಂದ ಯಾವ ಯಾವ ವಿಧಾನಗಳಲ್ಲಿ ಸ್ತ್ರೀಯ ಮೇಲೆ ಅನ್ಯಾಯ ನಡೆದಿದೆ ಎನ್ನುವದನ್ನು ಅವಳು ತರ್ಕಬದ್ಧವಾಗಿ ವಿವರಿಸುತ್ತಿದ್ದಳು. ಕೇವಲ ಸಮಾಜವಷ್ಟೇ ಅಲ್ಲ, ನಿಸರ್ಗವೂ ಸಹ ಮಹಿಳೆಗೆ ಅನ್ಯಾಯ ಮಾಡಿದೆ; ಶಿಶುವಿನ ಗರ್ಭಧಾರಣೆಯು ಸ್ತ್ರೀಯ Read More

ಭಾಗ – 22

ಅಮ್ಮನನ್ನು ನೋಡುವ ತವಕದಲ್ಲಿ ಹಳ್ಳಿ ಬಿಟ್ಟಾಗ ಭರತನ ಮನದ ತುಂಬಾ ಸರೋಜಮ್ಮನವರ ರೂಪವೇ ತುಂಬಿ ಹೋಗಿತ್ತು ಇಹದ ಅರಿವೇ ಇರಲಿಲ್ಲದವನಿಗೆ ಅವನ ಕಾರಿನ ಹಿಂಬದಿಯ ಸೀಟಿನಲ್ಲಿ ಯಾರಿದ್ದಾರೆ ಎಂಬ ಗಮನ ಹೋಗುವುದು ಹೇಗೆ? ಕೇಶವನ ಮನೆಯನ್ನು ಹಿಂಭಾಗದಿಂದ ಹೊಕ್ಕು ಕಿಟಕಿಂದಲೇ ಸರೋಜಮ್ಮನ ದರ್ಶನ ಮಾಡಿಕೊಂಡು ಭಾರವಾದ ಮನಸ್ಸಿನಿಂದ ಹೊರಬಂದು ಕಾರು ಓಡಿಸತೊಡಗಿದ ಭರತ ಖಾನ ಕಾರು Read More

ಹುಬ್ಬಳ್ಳಿಯಾಂವಾ – ಅಂಬಿಕಾತನಯದತ್ತ

ಕವಿ – ಅಂಬಿಕಾತನಯದತ್ತ ಕವನ ಸಂಕಲನ – ಸಖೀಗೀತ ಇನ್ನೂ ಯಾಕ ಬರಲಿಲ್ಲವ್ವಾ ಹುಬ್ಬಳ್ಳಿಯಾಂವಾ ವಾರದಾಗ ಮೂರು ಸರತಿ ಬಂದು ಹೋದಾಂವಾ ||ಪಲ್ಲ|| ಭಾರಿ ಜರದ ವಾರಿ ರುಮ್ಮಾಲಾ ಸುತ್ತಿಕೊಂಡಾಂವಾ ತುಂಬ ಮೀಸಿ ತೀಡಿಕೋತ ಹುಬ್ಬ ಹಾರಸಾಂವಾ ಮಾತು ಮಾತಿಗೆ ನಕ್ಕು ನಗಿಸಿ ಆಡಿಸ್ಯಾಡಾಂವಾ ಏನೊ ಅಂದರ ಏನೊ ಕಟ್ಟಿ ಹಾsಡ ಹಾಡಾಂವಾ ಇನ್ನೂ ಯಾಕ. Read More

ಭಾಗ – 21

ಭರತ ಪತ್ರವನ್ನು ಓದಿ ಮುಗಿಸಿದ. ಅವನನ್ನು ಬಹುದಿನಗಳಿಂದ ಕಾಡುತ್ತಿದ್ದ “ನಾನಾರು?” ಎಂಬ ಪ್ರಶ್ನೆಗೆ ಇಂದು ಉತ್ತರ ದೊರಕಿತ್ತು. ಸಮೀಯುಲ್ಲಾ ತನ್ನ ಹೆತ್ತ ತಂದೆ ಇರಲಾರರು ಎಂಬ ಅನುಮಾನ ಅವನಿಗೆ ಮೊದಲೇ ಇತ್ತು. ಸಮೀಯುಲ್ಲಾರ ಸಾತ್ವಿಕ ಸ್ವಭಾವಕ್ಕೂ, ತನ್ನಲ್ಲಿದ್ದ ಉಗ್ರ ಗುಣಕ್ಕೂ ಹೋಲಿಕೆಯೇ ಇಲ್ಲದ್ದು ಅವನ ಗಮನಕ್ಕೂ ಎಷ್ಟೋ ಬಾರಿ ಬಂದಿತ್ತು. ಯಾರನ್ನೂ ನೋಯಿಸೆನೆನ್ನುವ ಸಮೀಯುಲ್ಲಾರನ್ನು ನೋಡಿದಾಗ Read More